HEALTH TIPS

ಕರ್ನಾಟಕದಲ್ಲಿ ಕೆಎಸ್‍ಆರ್‍ಟಿಸಿ ಬಸ್ ಮೇಲೆ ಮೊಟ್ಟೆ ಎಸೆತ: ತನಿಖೆಗೆ ಸಚಿವ ಸಿ.ಪಿ. ಜಾನ್ ಆದೇಶ

ತಿರುವನಂತಪುರಂ: ಬೆಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಮೇಲೆ ಮೊಟ್ಟೆ ಎಸೆಯಲಾದ ಘಟನೆಯ ಬಗ್ಗೆ ತನಿಖೆಗೆ ಸಾರಿಗೆ ಸಚಿವ ಸಿ.ಪಿ. ಜಾನ್ ಆದೇಶ ನೀಡಿದ್ದಾರೆ. ಘಟನೆಯಲ್ಲಿ ವಿಧ್ವಂಸಕ ಕೃತ್ಯದ ಸಾಧ್ಯತೆಯನ್ನು ಪರಿಶೀಲಿಸಲಾಗುವುದು. 


ಘಟನೆಯ ಹಿಂದೆ ವಿಧ್ವಂಸಕ ಕೃತ್ಯದ ಕೈವಾಡವಿದೆ ಎಂಬ ಅನುಮಾನಗಳ ಹಿನ್ನೆಲೆಯಲ್ಲಿ, ಕೆಎಸ್‍ಆರ್‍ಟಿಸಿ ಬಿಡದಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ತನಿಖೆ ನಡೆಸುವಂತೆ ಕೋರಿ ಕರ್ನಾಟಕ ಡಿಜಿಪಿಗೂ ದೂರು ಸಲ್ಲಿಸಲಾಗಿದೆ.

ಅಪಘಾತವನ್ನುಂಟು ಮಾಡುವ ಉದ್ದೇಶದಿಂದ ದಾಳಿ ನಡೆಸಲಾಗಿದೆ ಎಂಬ ಅನುಮಾನಗಳ ಹಿನ್ನೆಲೆಯಲ್ಲಿ ವಿಧ್ವಂಸಕ ಕೃತ್ಯದ ಸಾಧ್ಯತೆಯ ಬಗ್ಗೆ ತನಿಖೆಗೆ ಸಾರಿಗೆ ಸಚಿವರು ಆದೇಶಿಸಿದ್ದಾರೆ. ಮೊನ್ನೆ ರಾತ್ರಿ 9 ಗಂಟೆ ಸುಮಾರಿಗೆ ಕರ್ನಾಟಕದ ಬಿಡದಿಯಲ್ಲಿ ಅಪರಿಚಿತ ಜನರು ಕೆಎಸ್‍ಆರ್‍ಟಿಸಿ ಬಸ್ ಮೇಲೆ ಮೊಟ್ಟೆ ಎಸೆದಿದ್ದಾರೆ. ಈ ಸ್ಥಳದಿಂದ ಎರಡು ಕಿಲೋಮೀಟರ್ ಒಳಗೆ 8 ರಂದು ಕೆಎಸ್‍ಆರ್‍ಟಿಸಿ ಬಸ್ ಪಲ್ಟಿಯಾಗಿತ್ತು. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries