ಪೆರ್ಲ: ಮಂಗಳೂರು ವಿಶ್ವ ವಿದ್ಯಾಲಯದ ಮಂಗಳಗಂಗೋತ್ರಿ ಕನಕದಾಸ ಅಧ್ಯಯನ ಪೀಠದ ಕನಕದಾಸ ಸಂಶೋಧನಾ ಕೇಂದ್ರ ವತಿಯಿಂದ 'ಕನಕಾಭಿಯಾನ'ಶಾಲಾ ವಿದ್ಯಾರ್ಥಿಗಳಿಗೆ ಕನಕ ಚಿಂತನೆ ಪ್ರಸಾರ ಮಾಲಿಕೆಯನ್ವಯ ಕನಕದಾಸರ ಜೀವನ ಮತ್ತು ಸಾಹಿತ್ಯದ ಕುರಿತು ಉಪನ್ಯಾಸ ಮತ್ತು ರಸಪ್ರಶ್ನೆ ಕಾರ್ಯಕ್ರಮ ಆ. 10ರಂದು ಬೆಳಗ್ಗೆ 9.30ಕ್ಕೆ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆ ಸಭಾಂಗಣದಲ್ಲಿ ಜರುಗಲಿದೆ.
ಶಾಲಾ ಮುಖ್ಯ ಶಿಕ್ಷಕ ಎನ್. ಕೇಶವ ಪ್ರಕಾಶ್ ಅಧ್ಯಕ್ಷತೆ ವಹಿಸುವರು. ಲೇಖಕಿ ರಾಜಶ್ರೀ ಟಿ. ರೈ ಆಶಯ ಭಾಷಣ ಮಾಡುವರು. ವಿದ್ಯಾರಣ್ಯ ವಿದ್ಯಾವರ್ದಕ ಸಂಘ ಉಪಾಧ್ಯಕ್ಷ ವೆಂಕಟ್ರಾಜ ಮಿತ್ರ ಹಗೂ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಬಿ.ಎಂ ಉಪಸ್ಥಿತರಿರುವರು. ಮಂಗಳೂರು ವಿಶ್ವ ವಿದ್ಯಾಲಯ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆ ಸಂಶೋಧನಾರ್ಥಿ ಸಾಯಿಸುಮಾ ನಾವಡ ಕಾರಿಂದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವರು.

