HEALTH TIPS

ರಾಜಕೀಯ ಪಕ್ಷಗಳಿಗೆ 'ಅನಾಮಧೇಯ' ಮೂಲದಿಂದ ದೇಣಿಗೆ:ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

 ನವದೆಹಲಿ (PTI): ರಾಜಕೀಯ ಪಕ್ಷಗಳು 'ಅನಾಮಧೇಯ' ಮೂಲಗಳಿಂದ ₹2,000ಕ್ಕಿಂತ ಕಡಿಮೆ ನಗದು ದೇಣಿಗೆ ಸ್ವೀಕರಿಸಲು ಅನುಮತಿಸುವ ಆದಾಯ ತೆರಿಗೆ ಕಾಯ್ದೆಯ ನಿಬಂಧನೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ನಡೆಸಲಿದೆ. 


ನ್ಯಾಯಮೂರ್ತಿಗಳಾದ ವಿಕ್ರಮ ನಾಥ್‌ ಮತ್ತು ಸಂದೀಪ್‌ ಮೆಹ್ತಾ ಅವರ ಪೀಠವು ಈ ವಿಷಯದ ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಈ ಅರ್ಜಿಗೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್‌ ಈ ಹಿಂದೆ ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಮತ್ತು ಇತರರಿಗೆ ಪ್ರತಿಕ್ರಿಯೆ ಕೋರಿ ನೋಟಿಸ್‌ ಜಾರಿಗೊಳಿಸಿತ್ತು.

'ದೇಣಿಗೆಯ ಮೂಲವನ್ನು ಬಹಿರಂಗಪಡಿಸದೇ ಇರುವುದರಿಂದ ಮತದಾರರಿಗೆ ರಾಜಕೀಯ ಪಕ್ಷಗಳ ಬಳಿಯಿರುವ ನಿಧಿಯ ಮೂಲದ ಬಗ್ಗೆ ಮಾಹಿತಿ ದೊರೆಯುವುದಿಲ್ಲ. ಈ ಪಾರದರ್ಶಕತೆಯ ಕೊರತೆಯು ಚುನಾವಣಾ ಪ್ರಕ್ರಿಯೆಯ ಪರಿಶುದ್ಧತೆ ಯನ್ನು ಹಾಳು ಮಾಡುತ್ತದೆ' ಎಂದು ಅರ್ಜಿಯಲ್ಲಿ ಹೇಳಲಾಗಿದೆ. 





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries