ತಿರುವನಂತಪುರಂ: ಎಡಿಜಿಪಿ ಎಂ.ಆರ್. ಅಜಿತ್ ಕುಮಾರ್ ವಿರುದ್ಧ ಪೋಲೀಸ್ ದೂರು ದಾಖಲಾಗಿದೆ. ಕ್ರಿಮಿನಲ್ ಪ್ರಕರಣ ದಾಖಲಿಸಿ ಎಫ್ಐಆರ್ ದಾಖಲಿಸಬೇಕೆಂದು ಒತ್ತಾಯಿಸಿ ಮುಕ್ಕಂ ಪೋಲೀಸರು ಮತ್ತು ತಾಮರಶ್ಶೇರಿ ನ್ಯಾಯಾಲಯಕ್ಕೆ ದೂರು ಸಲ್ಲಿಸಲಾಗಿದೆ.
ಚೆರುವಾಡಿ ಮೂಲದ ಸಿ.ಟಿ. ಮುನೀರ್ ದೂರು ದಾಖಲಿಸಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಎಂ.ಆರ್. ಅಜಿತ್ ಕುಮಾರ್ ಮಧ್ಯಪ್ರವೇಶಿಸಿ ಹಾಳುಗೆಡವಿದ್ದಾರೆ ಎಂಬುದು ಸ್ಪಷ್ಟವಾಗಿದೆ ಮತ್ತು ಕ್ರಿಮಿನಲ್ ಆರೋಪಗಳು ಬಹಿರಂಗಗೊಂಡ ಹಿನ್ನೆಲೆಯಲ್ಲಿ ಮತ್ತು ಅಮಾನತು ಮಾತ್ರ ಸಾಕಾಗುವುದಿಲ್ಲ ಎಂಬ ಹಿನ್ನೆಲೆಯಲ್ಲಿ ತಕ್ಷಣ ಪ್ರಕರಣ ದಾಖಲಿಸಬೇಕು.
ಆರಂಭದಲ್ಲಿ, ಮುಕ್ಕಂ ಪೆÇಲೀಸರು ದೂರಿನಲ್ಲಿ ಪ್ರಕರಣ ದಾಖಲಿಸಲಿಲ್ಲ. ಇದರ ನಂತರ, ತಾಮರಶ್ಶೇರಿ ನ್ಯಾಯಾಲಯವನ್ನು ಸಂಪರ್ಕಿಸಲಾಯಿತು. ನ್ಯಾಯಾಲಯವು ಘಟನೆಯ ಕುರಿತು ಪೆÇಲೀಸರಿಂದ ವರದಿಯನ್ನು ಕೋರಿದೆ.
ಆಲಪ್ಪುಳದಲ್ಲಿ ನಡೆದ 'ರಕ್ಷಣಾ ಕಾರ್ಯಾಚರಣೆ' ಪ್ರಕರಣವನ್ನು ಹಾಳುಮಾಡಲು ಪ್ರಯತ್ನಿಸಿದ್ದಾರೆ ಎಂಬ ದೂರಿನ ಮೇರೆಗೆ ರಾಜ್ಯ ಪೆÇಲೀಸ್ ಮುಖ್ಯಸ್ಥರು ಸಲ್ಲಿಸಿದ ವರದಿಯನ್ನು ಪರಿಗಣಿಸಿದ ನಂತರ ಸರ್ಕಾರ ಎಡಿಜಿಪಿ ಎಂ.ಆರ್. ಅಜಿತ್ ಕುಮಾರ್ ಅವರನ್ನು ಅಮಾನತುಗೊಳಿಸಿತ್ತು.
ಸಂತ್ರಸ್ತರಿಗೆ ಅನ್ಯಾಯ ಎಸಗಿದ್ದಾರೆ ಮತ್ತು ಆರೋಪಿಗಳನ್ನು ಕಾನೂನು ಕ್ರಮದಿಂದ ರಕ್ಷಿಸಿದ್ದಾರೆ ಎಂದು ಕಂಡುಬಂದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಅವರನ್ನು ಡಿಜಿಪಿ ಹುದ್ದೆಗೆ ಪರಿಗಣಿಸಬೇಕಾದಾಗ ಈ ಕ್ರಮ ಕೈಗೊಳ್ಳಲಾಗಿದೆ.

