HEALTH TIPS

ಮುಸೋಡಿ ಕಡಪ್ಪುರದಲ್ಲಿ ಪತ್ತೆಯಾಗಿದ್ದ ಮೃತದೇಹದ ಗುರುತು ಲಭ್ಯ

ಉಪ್ಪಳ: ಉಪ್ಪಳ ಮುಸೋಡಿ ಸಮುದ್ರ ದಡದಲ್ಲಿ ಪತ್ತೆಯಾಗಿದ್ದ ಮೃತದೇಹ ತಿರುವನಂತಪುರದಿಂದ ನಾಪತ್ತೆಯಾಗಿದ್ದ ವಿ. ರಾಜನ್ (64) ಅವರದ್ದೆಂದು ಕರಾವಳಿ ಠಾಣೆ ಪೋಲೀಸರು ಮಾಹಿತಿ ನೀಡಿದ್ದಾರೆ.

ರಾಜನ್ ಅವರು ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿದ್ದು ಜುಲೈ 27ರ ರಾತ್ರಿ ಮನೆಯಿಂದ ಹೊರಟ ಬಳಿಕ ಅವರು ನಾಪತ್ತೆಯಾಗಿದ್ದು, ಈ ಬಗ್ಗೆ ಮನೆಯವರು ತಿರುವನಂತಪುರ ಕಾಂಜಿರಂಕುಳಂ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಶುಕ್ರವಾರ ಮಧ್ಯಾಹ್ನ ಮುಸೋಡಿ ಸಮುದ್ರ ತೀರದಲ್ಲಿ ಮೃತದೇಹ ಪತ್ತೆಯಾಗಿತ್ತು. ಮಂಜೇಶ್ವರ  ಪೋಲೀಸರು ಹಾಗೂ ಕರಾವಳಿ ಠಾಣೆ ಪೆÇಲೀಸರು ನಡೆಸಿದ ತನಿಖೆಯಿಂದ ಮೃತದೇಹದ ಗುರುತು ಪತ್ತೆಹಚ್ಚಲಾಗಿದೆ.   



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries