ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಾಸರಗೋಡಿನ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕøತಿಕ ಕ್ಷೇತ್ರದಲ್ಲಿ ಸದಾ ಚಟುವಟಿಕೆಯಲ್ಲಿರುವ ನಿವೃತ್ತ ಶಿಕ್ಷಕಿ ಪುಂಡೂರು ಪ್ರಭಾವತಿ ಕೆದಿಲಾಯರಿಗೆ ಭಾನುವಾರ ಮಂಗಳೂರಿನ ಕಥಾಬಿಂಥು ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ವತಿಯಿಂದ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಕಥಾಬಿಂದು ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಮುಖ್ಯಸ್ಥ ಪಿ.ವಿ. ಪ್ರದೀಪ್ ಕುಮಾರ್, ಕಾಸರಗೋಡು ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ.ಕೆ. ವಾಮನ್ ರಾವ್ ಬೇಕಲ್ ಮೊದಲಾದವರು ಉಪಸ್ಥಿತರಿದ್ದರು.

.jpg)
