ಸಮರಸ ಚಿತ್ರಸುದ್ದಿ: ಕುಂಬಳೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಕುಂಬಳೆ ವಲಯದ ಶ್ರೀ ಕಿದೂರು ಮಹಾದೇವ ನವಜೀವನ ಸಮಿತಿ ವತಿಯಿಂದ ಮನೆ-ಮನೆ ಭಜನಾ ಕಾರ್ಯಕ್ರಮವನ್ನು ಕುಂಬಳೆ ವಲಯದ ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಪುಣಿಯೂರು ಅವರ ಮನೆಯಲ್ಲಿ ಭಜನಾ ಸಂಕೀರ್ತನೆಯೊಂದಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರು, ನವಜೀವನ ಸಮಿತಿ ಸದಸ್ಯರು, ಮನೆಯ ಕುಟುಂಬಸ್ಥರು ಭಾಗವಹಿಸಿದ್ದರು.

.jpg)
