ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸುವ ಪರೀಕ್ಷೆಗಳಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಶಿಕ್ಷಣ ಸಚಿವಾಲಯವು ಪ್ರಮುಖ ಬದಲಾವಣೆಗಳನ್ನು ಮಾಡಿದೆ.
ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟಲು ನಾಲ್ಕು ಹಂತದ ತಪಾಸಣಾ ವ್ಯವಸ್ಥೆಯನ್ನು ಜಾರಿಗೆ ತರಲು ಮತ್ತು 600 ತಜ್ಞರನ್ನು ವರ್ಗಾಯಿಸಲು ಮತ್ತು ಹೊಸ ತಜ್ಞರನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಓಖಿಂ ಕಚೇರಿಗಳ ಭದ್ರತೆಯನ್ನು CISF ವಹಿಸಿಕೊಳ್ಳಲಿದೆ.
UGC-NET ಪರೀಕ್ಷೆಗಳಲ್ಲಿನ ಲೋಪಗಳು ಮತ್ತು NEET-UG ಪ್ರಶ್ನೆಪತ್ರಿಕೆ ಸೋರಿಕೆಯ ನಂತರದ ಪ್ರತಿಭಟನೆಗಳ ನಂತರ ತೀವ್ರ ಬಿಕ್ಕಟ್ಟಿನಲ್ಲಿರುವ ಶಿಕ್ಷಣ ಸಚಿವಾಲಯವು ಪರೀಕ್ಷಾ ವ್ಯವಸ್ಥೆಯನ್ನು ದೋಷರಹಿತವಾಗಿಸಲು ತೀವ್ರ ಪ್ರಯತ್ನಗಳನ್ನು ಮಾಡುತ್ತಿದೆ.
ನೀಟ್ ವಿವಾದದ ನಂತರ ಧಮೇರ್ಂದ್ರ ಪ್ರಧಾನ್ ರಾಜೀನಾಮೆ ನೀಡಿದ ನಂತರ ಅಧಿಕಾರ ವಹಿಸಿಕೊಂಡ ನೂತನ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ಪ್ರಶ್ನೆ ಪತ್ರಿಕೆಗಳಲ್ಲಿನ ತಪ್ಪುಗಳು ಅಥವಾ ಲೋಪಗಳನ್ನು ತಡೆಗಟ್ಟಲು ಪ್ರಶ್ನೆಗಳ ತಯಾರಿಕೆಯಲ್ಲಿ ನಾಲ್ಕು ಹಂತದ ಪರಿಶೀಲನಾ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತಿದೆ.
ಪರೀಕ್ಷಾ ಮಂಡಳಿಯಿಂದ 600 ತಜ್ಞರನ್ನು ತೆಗೆದುಹಾಕಲಾಗುತ್ತಿದೆ ಮತ್ತು ಅವರ ಸ್ಥಾನದಲ್ಲಿ ಹೊಸ ತಜ್ಞರನ್ನು ನೇಮಿಸಲಾಗುತ್ತಿದೆ. ಮುಂದಿನ 2-3 ವಾರಗಳಲ್ಲಿ ಎನ್ಟಿಎಯಲ್ಲಿ 20 ರಿಂದ 25 ಹೊಸ ಅಧಿಕಾರಿಗಳನ್ನು ನೇಮಿಸಲಾಗುವುದು.
ಎನ್ಟಿಎ ಕಚೇರಿಗಳನ್ನು ಹೊಸ ಸಂಕೀರ್ಣಕ್ಕೆ ಸ್ಥಳಾಂತರಿಸಲಾಗುವುದು. ಸಿಐಎಸ್ಎಫ್ ಕೇಂದ್ರ ಪಡೆಗಳ ಸಹಾಯದಿಂದ ಇಲ್ಲಿ ಭದ್ರತೆಯನ್ನು ಬಲಪಡಿಸಲಾಗುವುದು.
ಪರೀಕ್ಷೆಗಳನ್ನು ಪಾರದರ್ಶಕ ರೀತಿಯಲ್ಲಿ ನಡೆಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.
ಎನ್ಟಿಎ ಮಹಾನಿರ್ದೇಶಕ ಅಭಿಷೇಕ್ ಸಿಂಗ್ ಅವರು ಇಲ್ಲಿಯವರೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಸಚಿವಾಲಯಕ್ಕೆ ಮಾಹಿತಿ ನೀಡಿದ್ದಾರೆ.

