ಸಮರಸ ಚಿತ್ರಸುದ್ದಿ: ಕಾಸರಗೋಡು: ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ 2026-28ನೇ ಸಾಲಿಗೆ ಸಂಘಟನೆ ರಾಜ್ಯ ಸಮಿತಿ ಉಪಾಧ್ಯಕ್ಷರಾಗಿ ಕಾಸರಗೋಡಿನ ಹಿರಿಯ ವ್ಯಾಪಾರಿ ಕೆ.ಅಹ್ಮದ್ ಶೆರೀಫ್ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ತ್ರಿಶೂರಿನಲ್ಲಿ ಸಂಘಟನೆ ರಾಜ್ಯಾಧ್ಯಕ್ಷ ರಾಜು ಅಪ್ಸರಾ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಈ ಆಯ್ಕೆ ನಡೆದಿದೆ.


