ನವದೆಹಲಿ: ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್ಐಆರ್) ಸಮಯದಲ್ಲಿ ಗಣತಿ ನಮೂನೆಗಳಲ್ಲಿನ ಎಲ್ಲಾ ವಿವರಗಳನ್ನು ಪರಿಶೀಲಿಸುವುದು ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು ಜವಾಬ್ದಾರಿಯಲ್ಲ ಎಂದು ದೆಹಲಿ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ.
ಮತದಾರರ ಛಾಯಾಚಿತ್ರಗಳಂತಹ ಪರಿಶೀಲಿಸಬಹುದಾದ ಮಾಹಿತಿಗೆ ಮಾತ್ರ ಬೂತ್ ಮಟ್ಟದ ಏಜೆಂಟ್ಗಳು (ಬಿಎಲ್ಎ) ಹೊಣೆಗಾರರಾಗಿರುತ್ತಾರೆ ಎಂದು ನ್ಯಾಯಮೂರ್ತಿ ಅಮಿತ್ ಬನ್ಸಲ್ ಅವರು ತೀರ್ಪಿನಲ್ಲಿ ಹೇಳಿದ್ದಾರೆ.
ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ (ಡಿಪಿಸಿಸಿ) ಅಧ್ಯಕ್ಷ ದೇವೇಂದರ್ ಯಾದವ್ ಮತ್ತು ಡಿಪಿಸಿಸಿಯ ಬೂತ್ ನಿರ್ವಹಣಾ ಸಮಿತಿಯ ಅಧ್ಯಕ್ಷರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿ ಈ ತೀರ್ಪು ನೀಡಲಾಗಿದೆ.

