ಬದಿಯಡ್ಕ : ಶಿಕ್ಷಕರ ದಿನಾಚರಣೆಯ ಅಂಗವಾಗಿ ಅಂಬೇಡ್ಕರ್ ವಿಚಾರ ವೇದಿಕೆ ವತಿಯಿಂದ ಕೆಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಬಾಲಕೃಷ್ಣ ಬೇರಿಕೆ ಅವರನ್ನು ಗೌರವಿಸಲಾಯಿತು.
ದಿ. ಕೃಷ್ಣ ದರ್ಬೆತಡ್ಕ ಸಂಸ್ಮರಣ ವೇದಿಕೆ ನೀರ್ಚಾಲು ಕಛೇರಿಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಕವಿ, ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ ವಹಿಸಿದ್ದರು. ಅಂಬೇಡ್ಕರ್ ವಿಚಾರ ವೇದಿಕೆಯ ನಾರಾಯಣ ಬಾರಡ್ಕ, ಬದಿಯಡ್ಕ ಗ್ರಾಮ ಪಂಚಾಯಿತಿ ಸದಸ್ಯ ಗಂಗಾಧರ ಗೋಳಿಯಡ್ಕ, ನಿವೃತ್ತ ಶಿಕ್ಷಕಿ ಸುನಂದಾ, ಪ್ರಗತಿ ವಿಶೇಷ ಚೇತನ ಶಾಲೆಯ ಆಡಳಿತಾಧಿಕಾರಿ ಉದಯಕುಮಾರ್ ಎಂ., ಕವಯತ್ರಿ ವನಜಾಕ್ಷಿ ಚೆಂಬ್ರಕಾನ ಉಪಸ್ಥಿತರಿದ್ದರು. ವೇದಿಕೆಯ ಅಧ್ಯಕ್ಷ ರಾಮ ಪಟ್ಟಾಜೆ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಸಮತಾ ಸಾಹಿತ್ಯ ವೇದಿಕೆಯ ಸಂಚಾಲಕ ಸುಂದರ ಬಾರಡ್ಕ ವಂದಿಸಿದರು.

.jpg)
