ಕಾಸರಗೋಡು: ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಕೀಕಾನದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿ ಮೃಥದೇಹ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೇಕಲ ಪಳ್ಳಿಕೆರೆ ಕೀನಾನ ನಿವಾಸಿ, ಮಂಗಳೂರು ಜಿಲ್ಲಾಧಿಕಾರಿ ಕಚೇರಿಯ ನೌಕರನಾದ ರಾಜೇಶ್ ಕುಮಾರ್ ಹಾಗೂ ಮಾನ್ಯ ಕಲ್ಬಟ್ಟ ಶಾಲಾ ಶಿಕ್ಷಕಿ ನಿರೀಕ್ಷಾ ದಂಪತಿ ಪುತ್ರ ಧ್ಯಾನ್ರಾಜ್ (15)ಮೃತಪಟ್ಟ ಬಾಲಕ ನಾಪತ್ತೆಯಾದ ಬಾಲಕ. ಈತ ಕಾಸರಗೋಡಿನ ಶಾಲೆಯೊಂದರ ವಿದ್ಯಾರ್ಥಿಯಾಗಿದ್ದಾನೆ. ಧ್ಯಾನ್ರಾಜ್ ಶುಕ್ರವಾರ ಸಂಜೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮನೆಯವರು ತಕ್ಷಣ ನೇಣಿನಿಂದ ಕೆಳಗಿಳಿಸಿ ಆಸ್ಪತ್ರೆಗೆ ತಲುಪಿಸಿದರೂ ಪ್ರಯೋಜನವಾಗಿರಲಿಲ್ಲ. ಪರೀಕ್ಷೆಯಲ್ಲಿ ಅಂಕ ಕಡಿಮೆಯಾಗಿರುವುದರಿಂದ ಮನನೊಂದು ಈತ ನೇಣಿಗೆ ಶರಣಾಗಿರಬೇಕೆಂದು ಸಂಶಯಿಸಲಾಗಿದೆ.
ಘಟನೆ ಬಗ್ಗೆ ಬೇಕಲ ಠಾಣೆ ಪೆÇಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

