ಮಂಜೇಶ್ವರ: ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ ವಾರ್ಷಿಕ ಪುಣ್ಯತಿಥಿ ಸೆ. 6 ರಂದು(ಇಂದು) ಬೆಳಗ್ಗೆ 10ಕ್ಕೆ ಮಂಜೇಶ್ವರ ಗಿಳಿವಿಂಡುವಿನಲ್ಲಿ ರಾಷ್ಟ್ರಕವಿಯ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜರಗಲಿದೆ.
ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಟ್ರಸ್ಟ್ ಮತ್ತು ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜು ಸಹಯೋಗದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಪೈ ಅಭಿಮಾನಿಗಳು, ಸಾಹಿತ್ಯಾಭಿಮಾನಿಗಳು ಭಾಗವಹಿಸುವಂತೆ ಸಂಘಟಕರು ಪ್ರಕಟಣೆಯಲ್ಲಿ ಕೋರಿದ್ದಾರೆ.


